ವಿಧಾನ ಪರಿಷತ್ ಚುನಾವಣೆ: ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಸೋಲಿಸಿರಿ

ಅಕ್ಟೋಬರ್ 28ರಂದು ನಡೆಯುವ ಶಿಕ್ಷಕರ ಹಾಗೂ ಪದವೀದರರ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ರಾಜ್ಯದ ಈ ಕ್ಷೇತ್ರಗಳ ಮತದಾರರಿಗೆ, ದೇಶದ ಹಾಗೂ ರಾಜ್ಯದ ದುಸ್ಥಿತಿಗೆ ಕಾರಣವಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೆರಡನ್ನು ನಿರ್ಣಾಯಕವಾಗಿ ಸೋಲಿಸಿ ಆ ಪಕ್ಷಗಳಿಗೆ ಸರಿಯಾದ ಪಾಠ ಕಲಿಸಲು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದೆ.

ಅದೇ ರೀತಿ, ಪಶ್ಚಿಮ ಪದವೀದರ ಕ್ಷೇತ್ರ ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಜಾತ್ಯಾತೀತ ಜನತಾದಳದ ಅಭ್ಯರ್ಥಿಗಳನ್ನು ಗೆಲ್ಲಿಸಲು ಹಾಗೂ ಪಶ್ಚಿಮ ಪದವೀದರ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾದ ಶ್ರೀ ಬಸವರಾಜ ಗುರಿಕಾರ ಅವರನ್ನು ಗೆಲ್ಲಿಸಲು ಸಿಪಿಐ(ಎಂ) ಮನವಿ ಮಾಡಿದೆ.

ಯು. ಬಸವರಾಜ

ಕಾರ್ಯದರ್ಶಿ

23.10.2020

Leave a Reply

Your email address will not be published. Required fields are marked *