ದಲಿತ ಮಹಿಳೆ ಮೇಲಿನ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಯಾದಗಿರಿ ಜಿಲ್ಲೆ ಸುರಪರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಅಕ್ಟೋಬರ್‌ 03, 2021ರಂದು ಅಳ್ಳಳ್ಳಿ ಗ್ರಾಮದ ಗಂಗಪ್ಪ, ಬಸಪ್ಪ ಮತ್ತು ಇತರರು ಸೇರಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಯತ್ನ ಮಾಡಿ, ಆಕೆ ಪ್ರತಿಭಟಿಸಿದಾಗ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿರುವ ಅಮಾನವೀಯ ಘಟನೆ ನಡೆದಿದೆ. ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಈ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತದೆ.

ಯಾದಗಿರಿ ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ತೀವ್ರಗೊಳ್ಳುತ್ತಿರುವುದಕ್ಕೆ ಸಂಬಂಧಿಸಿ ಸಿಪಿಐ(ಎಂ) ತೀವ್ರ ಆತಂಕವನ್ನು ವ್ಯಕ್ತಪಡಿಸುತ್ತದೆ. ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಿಸ್ಪಕ್ಷಪಾತವಾಗಿ ತಮ್ಮ ಪ್ರಾಥಮಿಕ ಹೇಳಿಕೆಗೆ ಬದ್ಧವಾಗಿ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಕ್ರಮವಹಿಸಬೇಕು ಮತ್ತು ಸಂತ್ರಸ್ಥ ಕುಟುಂಬಕ್ಕೆ ಸರ್ಕಾರ 25 ಲಕ್ಷ ರೂ ಪರಿಹಾರ ನೀಡಬೇಕಾಗಿ ಸಿಪಿಐ(ಎಂ) ರಾಜ್ಯ ಸಮಿತಿ ಆಗ್ರಹಿಸುತ್ತದೆ.

ಯು.ಬಸವರಾಜ, ಕಾರ್ಯದರ್ಶಿ

Leave a Reply

Your email address will not be published. Required fields are marked *